
ಕಳೆದ ಫೆಬ್ರವರಿ 14ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರ ದಾಳಿಯಲ್ಲಿ ಹುತಾತ್ಮರಾದ 40+ ಸಿಆರ್ ಪಿಎಫ್ ಯೋಧರ ಕುಟುಂಬಕ್ಕೆ ಮಾತಾ ಅಮೃತಾನಂದಮಯಿ ಮಠ ತಲಾ 5 ಲಕ್ಷ ರು. ಪರಿಹಾರ ಘೋಷಿಸಿದೆ.
ದೇಶ ಹೆಮ್ಮೆಯ ಯೋಧರನ್ನು ಕಳೆದುಕೊಂಡಿದೆ. ಯೋಧರ ಕುಟುಂಬಕ್ಕೆ ಸಹಾಯ ಮಾಡುವುದು ನಮ್ಮ ಧರ್ಮ, ನಮ್ಮನ್ನು ಸುರಕ್ಷಿತವಾಗಿಡಲು ಅವರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕುಟುಂಬಸ್ಥರಿಗೆ ಈ ನೋವನ್ನು ತಡೆದುಕೊಳ್ಳುವ ಶಕ್ತಿ ದೊರೆಯಲಿ ಎಂದು ಶ್ರೀ ಮಾತಾ ಅಮೃತಾನಂದಯಿ ಹೇಳಿದ್ದಾರೆ.
2019ರ ಭಾರತ ಯಾತ್ರೆ ಪ್ರಯುಕ್ತ ಮಾತಾ ಅಮೃತಾನಂದಮಯಿ ಮೈಸೂರಿಗೆ ತೆರಳುತ್ತಿದ್ದು, ಇದೇ ಸಂದರ್ಭದಲ್ಲಿ ಹುತಾತ್ಮ ಯೋಧರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ.

Download Amma App and stay connected to Amma