ಮಕ್ಕಳಿಗೆ ಆಧ್ಯಾತ್ಮಿಕ ಸಂಸ್ಕಾರ ಸಿಗಬೇಕಾದದ್ದು ಅವರ ತಾಯಿಯಂದಿರಿಂದ. ಆದರೆ ಇವತ್ತು ನಮ್ಮ ತಾಯಂದಿರಿಗೆ ಅವರ ಮಕ್ಕಳು ಡಾಕ್ಟರಾಗಬೇಕು, ಅಲ್ಲದಿದ್ದರೆ ಎಂಜಿನೀಯರ್ ಆಗಬೇಕು ಎಂದು ಮಾತ್ರವೆ ಇರುವುದು. ಮಕ್ಕಳು ಒಳ್ಳೆ ಮನುಷ್ಯರಾಗಬೇಕು ಎನ್ನುವುದಕ್ಕೆ, ಅಪ್ಪ ಅಮ್ಮಂದಿರು ಸ್ವಲ್ಪವೂ ಪ್ರಾಮುಖ್ಯತೆ ನೀಡುವುದಿಲ್ಲ. ನಮಗೆ ನಮ್ಮದೆ ಆದ ಯಾವುದೆ ಆದರ್ಶವಿಲ್ಲ. – ಅಮ್ಮ