ನಮಗೆ ಯಾವುದೇ ವಸ್ತು ದೊರಕಬೇಕಾದರೂ ಅದಕ್ಕೊಂದು ಬೆಲೆ ತೆರಬೇಕು. ಆ ಕಡೆಗೆ ಏನೂ ಕೊಡದೆ, ಏನಾದರೂ ಗಳಿಸಲು ಕರ್ಮ ಕ್ಷೇತ್ರದಲ್ಲಿ ಸಾಧ್ಯವಲ್ಲ. ಒಳ್ಳೆ ಉದ್ಯೋಗ ಸಿಗಬೇಕೆಂದಿದ್ದರೆ, ನಿದ್ದೆಗೆಟ್ಟು, ಕಷ್ಟಪಟ್ಟು ಕಲಿಯಬೇಕು. ಒಳ್ಳೆ ಫಸಲು ಬರಬೇಕೆಂದಿದ್ದರೆ, ಸಮಯಕ್ಕೆ ಸರಿಯಾಗಿ ಬೀಜ ಬಿತ್ತಿ, ಬೇಕಾದ ಗೊಬ್ಬರವನ್ನೂ ನೀರನ್ನೂ ಕೊಡಬೇಕು. – ಅಮ್ಮ