Author / kannada

ಒಬ್ಬ ಆಧ್ಯಾತ್ಮಿಕ ಜೀವಿಯು ಜಗತ್ತಿನ ಪೂರ್ಣ ಭಾರಕ್ಕೆ ಹೆಗಲು ಕೊಡಬೇಕಾದವನು. ಅವನು ಎಂದೂ ದುರ್ಬಲನಾಗಬಾರದು; ಚುರುಕಿನ ಸಿಂಹದ ಮರಿಯಾಗಿರಬೇಕು. ____ ಗುರುವಿನಲ್ಲಿ ಪೂರ್ತಿ ವಿಶ್ವಾಸವಿರುವವನು ಗುರುವಿನಲ್ಲಿ ಒಂದು ಪ್ರಶ್ನೆಯನ್ನು ಸಹ ಕೇಳುವುದಿಲ್ಲ. ಗುರು ಹೇಳುವುದನ್ನೇ ಅನುಸರಿಸುವನು. ಅದುವೇ ಗುರುಸೇವೆ. ಶಿಷ್ಯನ ಶ್ರದ್ಧೆಯೊಡಗೂಡಿರುವ ಓಡಾಟ ನೋಡಿದಾಗ ತನಗರಿವಿಲ್ಲದೆಯೆ ಗುರು ಅವನಲ್ಲಿ ಕೃಪೆ ಸುರಿಸುತ್ತಾನೆ. ತಗ್ಗು ನೆಲದಲ್ಲಿ, ನೀರು ತನ್ನಷ್ಟಕ್ಕೆ ಹರಿದು ಸೇರುವ ಹಾಗೆ. ____ ಆಧ್ಯಾತ್ಮಿಕವೂ ಲೌಕಿಕವೂ ಜೊತೆಜೊತೆಯಾಗಿ ಹೋಗಲು ಸಾಧ್ಯವಿದೆ. ಆದರೆ, ಸಂಬಂಧಗಳ ಬಂಧನವಿಲ್ಲದೆ, ನಿಷ್ಕಾಮವಾಗಿ ಕೆಲಸ […]

ಮಕ್ಕಳ ಚಿತ್ತವೃತ್ತಿಗಳು, ಕನಸುಗಳು ಎಲ್ಲವೂ ಅಮ್ಮನನ್ನು ಹಾದು ಹೋಗುವುದು. ಹಾಗಾಗಿ ಮಕ್ಕಳಿಗೆ ಅಮ್ಮನಿಂದ ಏನನ್ನೂ ಬಚ್ಚಿಡಲಾಗದು. ___ ಭಗವಾನ್ ಶ್ರೀ ಕೃಷ್ಣನು ಶುದ್ಧ ಬೋಧನು. ನೀವು ಬಯಕೆಗಳನ್ನು ಪೂರ್ಣವಾಗಿ ತ್ಯಜಿಸಿದಲ್ಲಿ ನಿಮ್ಮ ಮನದಲ್ಲಿ ಕೃಷ್ಣನ ನಿಜ ರೂಪ ಸ್ಪಷ್ಟವಾಗುವುದು. ___ ಮರಗಳು, ಬಳ್ಳಿಗಳು, ವಾತಾವರಣವೆಲ್ಲವೂ ರಾತ್ರಿ ನಿಶ್ಚಲವಾಗುತ್ತದೆ. ಪ್ರಾಣಿಗಳಲ್ಲದೆ, ಲೌಕಿಕರಾಗಿ ಜೀವಿಸುವವರವರನ್ನೂ, ನಿದ್ದೆ ಜಯಿಸುತ್ತದೆ. ಈ ಕಾರಣದಿಂದ, ವಾತಾವರಣದಲ್ಲಿ ಲೌಕಿಕ ವಿಚಾರಗಳ ತರಂಗಗಳು ಕಮ್ಮಿಯಾಗುತ್ತದೆ. ರಾತ್ರಿಯ ಅಂತಿಮ ಜಾವದಲ್ಲಿ ಹೂವುಗಳು ಅರಳುವುದು. ವಾತಾವರಣದಲ್ಲಿ ಆಗ ಒಂದು ವಿಶೇಷ […]

ಪ್ರಶ್ನೆ: ದೇವರ ಕೃಪೆಗೂ, ಮಹಾತ್ಮರ ಕೃಪೆಗೂ ಏನು ವ್ಯತ್ಯಾಸ ? “ಆತ್ಮಕ್ಕೆ ಭೇದವಿಲ್ಲ. ಅದು ಎಲ್ಲರಲ್ಲೂ ಒಂದೇ. ಮಹಾತ್ಮರು ಆತ್ಮದ ಸ್ವರೂಪವನ್ನು ತಮ್ಮ ಅರಿವಿನ ಸ್ತರಕ್ಕೆ ತರುತ್ತಾರೆ, ಅಷ್ಟೆ. ನಾವೆಲ್ಲರೂ ಕನ್ನಡಿಗಳು. ಆದರೆ ನಮ್ಮಲ್ಲ್ಲಿ ಪಾದರಸವಿಲ್ಲ. ಮಹಾತ್ಮರ ತಪಸ್ಸಿನಿಂದ ಪಾದರಸ ಉದ್ಭವವಾಗುತ್ತದೆ. ಪಾದರಸವಿರುವ ಕನ್ನಡಿಯಲ್ಲಿ ತಾನೇ ಸ್ಪಷ್ಟವಾದ ಪ್ರತಿಬಿಂಬ ಕಾಣಿಸುವುದು ? ಒಬ್ಬ ಮಹಾತ್ಮನೆದುರಿಗೆ ಹೋದಾಗ ನಮ್ಮ ನಿಜವಾದ ಸ್ವರೂಪ ಅವರಲ್ಲಿ ಪ್ರತಿಫಲಿಸಿ ಕಾಣಲು ಸಾಧ್ಯವಾಗುತ್ತದೆ. ಅದನ್ನು ನೋಡಿ ನಮ್ಮ ಕುರೂಪವನ್ನೂ ಮಲಿನತೆಗಳನ್ನೂ ತೊರೆಯಲು ಸಾಧ್ಯವಾಗುತ್ತದೆ. ಕರೆಂಟು […]

ಪ್ರಶ್ನೆ: ಈ ಲೋಕದಲ್ಲಿ ಎಷ್ಟೋ ಜನರು ಕಷ್ಟ ಪಡುತ್ತಾರೆ; ಉಪವಾಸ ಅಲೆಯುತ್ತಾರೆ. ಇನ್ನು ಕೆಲವರು ಹಣವಂತರಾಗಿ ಸುಖ ಅನುಭವಿಸುತ್ತಾರೆ. ದೇವರು ಕರುಣಾಮಯನೆಂದು ಹೇಳುತ್ತಾರೆ. ಆದರೆ ಅವನ ಕೆಲವು ವಿಷಯಗಳನ್ನು ನೋಡುವಾಗ ಎದ್ದು ಕಾಣುವುದು ಕರುಣೆಯಲ್ಲ, ಕ್ರೂರತನ. ಮಕ್ಕಳೇ, ತಪ್ಪು ದೇವರದಲ್ಲ. ದೇವರು ಕರುಣಾಮಯನೆ. ಮಕ್ಕಳೇ, ನಮ್ಮ ತಾಯಿ ನಮ್ಮನ್ನು ಹೆರುತ್ತಾಳೆ; ಬೆಳೆಯಬೇಕಾದ ಮಾರ್ಗವನ್ನೂ ನಮಗೆ ಹೇಳಿ ಕೊಡುತ್ತಾಳೆ. ಅದನ್ನನುಸರಿಸದಿದ್ದರೆ ನಮ್ಮ ಬೆಳವಣಿಗೆ ಕುಂಠಿತವಾಗುತ್ತದೆ. ಹಾಗೆಂದು ದೇವರ ಮೇಲೆ ಕ್ರೂರತನದ ಆರೋಪಣೆ ಮಾಡುವುದೆಂದರೆ ಅದು ನಮ್ಮತಾಯಿಯ ಮೇಲೆ ಅಪವಾದ […]

ಪ್ರಶ್ನೆ: ಅಮ್ಮಾ, ಪ್ರಾರ್ಥನೆ ಹೇಗಿರಬೇಕು ? “ಲೋಕದ ಏಳಿಗೆಗಾಗಿ ಮಾಡುವ ಪ್ರಾರ್ಥನೆಯೇ ಅತ್ಯಂತ ಶ್ರೇಷ್ಟವಾದದ್ದು. ಆಸೆವಿಹೀನ ನಿಷ್ಕಾಮ ಪ್ರಾರ್ಥನೆ – ಅದುವೇ ಬೇಕಾಗಿರುವುದು. ’ದೇವರೇ, ಲೋಕದ ಕಷ್ಟಗಳನ್ನು ನಿವಾರಿಸು. ದೇವರೇ, ಎಲ್ಲರಿಗೂ ಒಳ್ಳೆಮನಸ್ಸನ್ನು ದಯಪಾಲಿಸು. ದೇವರೇ, ಎಲ್ಲರನ್ನೂ ಕಾಪಾಡು’ ಹೀಗೆ ಪ್ರಾರ್ಥಿಸಿರಿ ಮಕ್ಕಳೇ. ಪೂಜೆಗಾಗಿ ಹೂಗಳನ್ನು ಕೊಯ್ಯುತ್ತೇವೆ. ಆ ಹೂವಿನ ಸೊಬಗನ್ನೂ, ಸುಗಂಧವನ್ನೂ ನಮಗೆ ಅರಿವಿಲ್ಲದೆಯೂ ಮೊದಲು ಆಸ್ವಾದಿಸುವವರು ನಾವೆಯೇ. ’ಲೋಕಕ್ಕೆ ಒಳಿತು ಮಾಡು’ ಎಂದು ಪ್ರಾರ್ಥಿಸುವಾಗ ಸ್ವತಃ ನಾವೇ ಒಳ್ಳೆಯವರಾಗುತ್ತೇವೆ. ದೇವರಿಗೆ ಮಾಡುವ ಸೇವೆ, ಲೋಕಕ್ಕೆ […]