Author / kannada

ಪ್ರಶ್ನೆ: ತಪಸ್ಸಿನಿಂದ ಶಕ್ತಿ ಹೇಗೆ ಉಂಟಾಗುತ್ತದೆ ? “ಒಂಬತ್ತು ಕವಲುಗಳಿರುವ ಒಂದು ನದಿಯಿದೆ. ಅದರ ಪ್ರವಾಹಕ್ಕೆ ಬಲವಿಲ್ಲ. ಆದರೆ ಆ ಒಂಬತ್ತು ಕವಲುಗಳನ್ನು ಮುಚ್ಚಿ ನದಿಯಲ್ಲಿ ಮಾತ್ರ ನೀರು ಹರಿಯಲು ಬಿಟ್ಟರೆ, ಪ್ರವಾಹ ಶಕ್ತಿಶಾಲಿಯಾಗುತ್ತದೆ. ಆ ಶಕ್ತಿಯಿಂದಲೇ ಕರೆಂಟ್ ಉತ್ಪಾದಿಸುತ್ತಾರೆ. ಇದೇ ತರ ನಿಮ್ಮ ಆಲೋಚನೆಗಳನ್ನು, ಬಹುಮುಖವಾಗಿ ಹಾರುವ ಮನಸ್ಸನ್ನು, ಏಕತ್ವದಲ್ಲಿ ಕೇಂದ್ರೀಕರಿಸಿದರೆ, ನಿಮ್ಮಲ್ಲಿ ನಿಶ್ಚಯವಾಗಿಯೂ ಈ ಶಕ್ತಿ ಉಂಟಾಗುತ್ತದೆ. ಇತರರಿಗೆ ಶರೀರ ಮೂಲಕವೂ, ಮನಸ್ಸು ಮೂಲಕವೂ, ಬುದ್ಧಿ ಮೂಲಕವೂ, ಪ್ರವೃತ್ತಿ ಮೂಲಕವೂ, ಮಾತು ಮೂಲಕವೂ, ಈ […]

ಪ್ರಶ್ನೆ: ಅಮ್ಮನಿಗೇಕೆ ಈ ವೇಷ ?* ಶಂಕರಾಚಾರ್ಯರೂ, ಶ್ರೀ ರಾಮಕೃಷ್ಣರೂ, ಚಟ್ಟಾಂಬಿ ಸ್ವಾಮಿಗಳೂ, ನಾರಾಯಣ ಗುರುಗಳೂ,** ಮತ್ತಿತರರೂ ಇಷ್ಟೆಲ್ಲ ವಸ್ತ್ರಧರಿಸಿ ಅಲಂಕರಿಸಿ ಕೊಂಡಿರಲಿಲ್ಲವಲ್ಲ ? “ಮಕ್ಕಳೇ, ಹಾಗಿದ್ದ ಮೇಲೆ ಶಂಕರಾಚಾರ್ಯರು ಮಾತ್ರ ಸಾಕಾಗಿತ್ತಲ್ಲ ಲೋಕವನ್ನು ಉದ್ಧರಿಸಲು ? ಒಬ್ಬರ ಹಾಗೆ ಇನ್ನೊಬ್ಬರಿಲ್ಲ. ಶ್ರೀ ರಾಮನ ಹಾಗಿರಲಿಲ್ಲ ಶ್ರೀ ಕೃಷ್ಣ. ಶ್ರೀ ರಾಮಕೃಷ್ಣರ ಹಾಗಿರಲಿಲ್ಲ ರಮಣ ಮಹರ್ಷಿ. ಪ್ರತಿಯೊಂದು ಅವತಾರಕ್ಕೂ ಒಂದು ಉದ್ದೇಶ ಲಕ್ಷ್ಯಗಳಿದೆ. ಅವರು ಅನುಸರಿಸುವ ಮಾರ್ಗವೂ ಬೇರೆ ಬೇರೆಯಾಗಿರುತ್ತದೆ. ಒಬ್ಬರ ಹಾಗೆ ಇನ್ನೊಬ್ಬರು ಮಾಡಬೇಕೆಂದೇನಿಲ್ಲ. ಮಕ್ಕಳೇ, […]

ನಿಮ್ಮ ದಿನದಲ್ಲಿ ಇಪ್ಪತ್ತನಾಲ್ಕು ಗಂಟೆಗಳಿದೆ. ಒಂದು ಗಂಟೆ ದೈವೀ ವಿಚಾರಗಳಿಗೆ ಮೀಸಲಿಡಿರಿ. ಜೋರಾಗಿ ಅಳುತ್ತ ಅರ್ಧ ಗಂಟೆ ಪ್ರಾರ್ಥನೆ ಮಾಡಿದರೆ ಸಾಕು, ದೇವರ ಕೃಪೆ ನಿಮ್ಮನ್ನು ಬಂದು ತಲಪುವುದು. ಏಕಾಗ್ರತೆ ಬೇಕು; ಭಕ್ತಿ ಬೇಕು. ಈ ಕಲಿಯುಗದಲ್ಲಿ ನಾಮ ಜಪ ಸುಲಭ. ಮನಕರಗುವ ಭಜನೆಯು ಎಷ್ಟೋ ಒಳ್ಳೆಯ ಸಾಧನಾಮಾರ್ಗ. ______________ ತಳಪಾಯ ಚೆನ್ನಾಗಿ ಗಟ್ಟಿಯಾಗಿದ್ದರೆ ಮಾತ್ರವೇ ಕಟ್ಟಡ ಮೇಲೆಬ್ಬಿಸಲು ಸಾಧ್ಯ; ಬಹಳ ಕೆಳಗಿದ್ದರೆ ಮಾತ್ರವೇ ಏರಲು ಸಾಧ್ಯ. ______________ ಕಾಮವನ್ನು ಹೋಗಲಾಡಿಸುವುದು ಬಹಳ, ಬಹಳ ಕಷ್ಟ. ರಾಮನು […]

ಪ್ರಶ್ನೆ: ಅಮ್ಮಾ, ನಾನು ಬ್ರಹ್ಮನ್ ಅಲ್ಲವೇ, ಹಾಗಿದ್ದ ಮೇಲೆ ಸಾಧನೆ ಯಾಕೆ ಮಾಡಬೇಕು ? “ಮಗನೇ, ಮಗನ ಹೆಸರು ಕರೆಯದೆ ಮಗನು ಹಿಂತಿರುಗಿ ನೋಡಲು ಸಾಧ್ಯವೇ ? ಆದಕಾರಣ, ನಾವು ನಿಂತಿರುವುದು ನಾಮದ ಮೇಲೆ. ಮಗನೇ, ನಿನಗೆ ನಿನ್ನೆಯಿಲ್ಲವೆ, ಇವತ್ತಿಲ್ಲವೆ, ನಾಳೆಯಿಲ್ಲವೆ, ನನ್ನ ಹೆಂಡತಿಯೆಂದೂ ಮಕ್ಕಳೆಂದೂ ಇಲ್ಲವೆ ? ರುಚಿಯೂ ಅರುಚಿಯೂ ಇಲ್ಲವೆ ? ನೀನು ಬ್ರಹ್ಮನ್ನಲ್ಲಿ ಇರುವವನು ಆದರೂ ಬ್ರಹ್ಮನ್ ಆಗಿಲ್ಲ. ಈಗಿನ ನಿನ್ನ ಬ್ರಹ್ಮನ್ ವಿವೇಚನೆಯಿಲ್ಲದ ಪ್ರಾಣಿಗಳ ಹಾಗೆ. ಅವೆಲ್ಲ ಬ್ರಹ್ಮವೆ ತಾನೆ. ಅದೇ […]

ಪ್ರಶ್ನೆ: ಅಮ್ಮಾ, ಕ್ಷೇತ್ರಗಳಲ್ಲಿ ಪೂಜೆ ನಿಲ್ಲಿಸಿದರೆ ಪ್ರತಿಕೂಲ ಪರಿಣಾಮವಾಗುತ್ತದೆಂದು ಹೇಳುತ್ತಾರೆ; ನಿಜವೇ ? “ಮಕ್ಕಳೇ, ಮನುಷ್ಯನ ಸಂಕಲ್ಪದಿಂದಾಗಿ ದೆವತೆಗಳ ಶಕ್ತಿ ವೃದ್ಧಿಯಾಗುತ್ತಿರುತ್ತದೆ. ಪೂಜೆ ನಿಲ್ಲಿಸಿದರೆ, ಅದು ಕ್ಷೀಣಿಸುವುದು. ದೇವರು ಸರ್ವಶಕ್ತನು. ಅವನ ಶಕ್ತಿ ಹೆಚ್ಚಾಗುವುದಿಲ್ಲ; ಕಡಿಮೆಯಾಗುವುದಿಲ್ಲ. ಅದು ನಿತ್ಯವೂ ಶಾಶ್ವತ.ಆದರೆ ದೇವತೆಗಳ ಶಕ್ತಿ ಪ್ರತಿಷ್ಠಾಪನೆ ಮಾಡುವವರ ಭಾವನೆಯನ್ನವಲಂಬಿಸಿದೆ. ಕ್ಷೇತ್ರಗಳಲ್ಲೂ, ಕುಟುಂಬ ದೇವತೆಗಳ ಕ್ಷೇತ್ರಗಳಲ್ಲೂ ಪೂಜೆ ನಿಲ್ಲಿಸಬಾರದು. ನಿಲ್ಲಿಸಿದ್ದಾದರೆ ದೊಡ್ಡ ದೋಷಗಳು ಘಟಿಸಬಹುದು. ” “ಮಕ್ಕಳೇ, ಒಂದು ಕಾಗೆಗೆ ನಾವು ಹತ್ತು ದಿವಸ ಆಹಾರ ಕೊಟ್ಟು ಅಭ್ಯಾಸಮಾಡಿದೆವೆಂದು ಇಟ್ಟುಕೊಳ್ಳೋಣ. […]