Category / ಅಮ್ಮನ ಸಂದೇಶ

ಪ್ರಶ್ನೆ: ಸಂಪತ್ತು ಗಳಿಸುವುದು ಆಧ್ಯಾತ್ಮಿಕತೆಗೆ ವಿರೋಧವೇ ? “ಮಕ್ಕಳೇ, ಎಷ್ಟು ಸ್ವತ್ತಿದ್ದರೂ, ಅದರ ಸ್ಥಾನವನ್ನೂ ಪ್ರಯೋಜನವನ್ನೂ ಚೆನ್ನಾಗಿ ಅರ್ಥ ಮಾಡಿಕೊಳ್ಳದಿರುವ ತನಕ ದುಃಖ ಮಾತ್ರವೇ ನಮ್ಮ ಪಾಲಿಗೆ ಇರುವುದು. ಅಗಣಿತ ಸಂಪತ್ತಿದ್ದರೂ ಅದರಿಂದ ಸಿಗುವ ಆನಂದ ತಾತ್ಕಾಲಿಕ ಮಕ್ಕಳೇ. ಶಾಶ್ವತವಾದ ಆನಂದ ಕೊಡಲು ಅದಕ್ಕೆ ಸಾಧ್ಯವಿಲ್ಲ. ಕಂಸನೂ ಹಿರಣ್ಯಕಶಿಪುವೂ ಎಲ್ಲಾ ಸಂಪತ್ತಿನ ಅಧಿಪತಿಗಳಾಗಿರಲಿಲ್ಲವೇ ? ಅವರಿಗೆ ಮನಸ್ಸಮಾಧಾನ ಇತ್ತೇ ? ಎಲ್ಲಾ ಇದ್ದ ರಾವಣನಿಗೆ ಏನು ಶಾಂತಿಯಿತ್ತು ? ಅವರೆಲ್ಲ ಸತ್ಯದ ದಾರಿ ತೊರೆದು, ಅಹಂಕಾರಿಗಳಾಗಿ ಬಾಳಿದರು. […]

ಒಬ್ಬ ಆಧ್ಯಾತ್ಮಿಕ ಜೀವಿಯು ಜಗತ್ತಿನ ಪೂರ್ಣ ಭಾರಕ್ಕೆ ಹೆಗಲು ಕೊಡಬೇಕಾದವನು. ಅವನು ಎಂದೂ ದುರ್ಬಲನಾಗಬಾರದು; ಚುರುಕಿನ ಸಿಂಹದ ಮರಿಯಾಗಿರಬೇಕು. ____ ಗುರುವಿನಲ್ಲಿ ಪೂರ್ತಿ ವಿಶ್ವಾಸವಿರುವವನು ಗುರುವಿನಲ್ಲಿ ಒಂದು ಪ್ರಶ್ನೆಯನ್ನು ಸಹ ಕೇಳುವುದಿಲ್ಲ. ಗುರು ಹೇಳುವುದನ್ನೇ ಅನುಸರಿಸುವನು. ಅದುವೇ ಗುರುಸೇವೆ. ಶಿಷ್ಯನ ಶ್ರದ್ಧೆಯೊಡಗೂಡಿರುವ ಓಡಾಟ ನೋಡಿದಾಗ ತನಗರಿವಿಲ್ಲದೆಯೆ ಗುರು ಅವನಲ್ಲಿ ಕೃಪೆ ಸುರಿಸುತ್ತಾನೆ. ತಗ್ಗು ನೆಲದಲ್ಲಿ, ನೀರು ತನ್ನಷ್ಟಕ್ಕೆ ಹರಿದು ಸೇರುವ ಹಾಗೆ. ____ ಆಧ್ಯಾತ್ಮಿಕವೂ ಲೌಕಿಕವೂ ಜೊತೆಜೊತೆಯಾಗಿ ಹೋಗಲು ಸಾಧ್ಯವಿದೆ. ಆದರೆ, ಸಂಬಂಧಗಳ ಬಂಧನವಿಲ್ಲದೆ, ನಿಷ್ಕಾಮವಾಗಿ ಕೆಲಸ […]

ಮಕ್ಕಳ ಚಿತ್ತವೃತ್ತಿಗಳು, ಕನಸುಗಳು ಎಲ್ಲವೂ ಅಮ್ಮನನ್ನು ಹಾದು ಹೋಗುವುದು. ಹಾಗಾಗಿ ಮಕ್ಕಳಿಗೆ ಅಮ್ಮನಿಂದ ಏನನ್ನೂ ಬಚ್ಚಿಡಲಾಗದು. ___ ಭಗವಾನ್ ಶ್ರೀ ಕೃಷ್ಣನು ಶುದ್ಧ ಬೋಧನು. ನೀವು ಬಯಕೆಗಳನ್ನು ಪೂರ್ಣವಾಗಿ ತ್ಯಜಿಸಿದಲ್ಲಿ ನಿಮ್ಮ ಮನದಲ್ಲಿ ಕೃಷ್ಣನ ನಿಜ ರೂಪ ಸ್ಪಷ್ಟವಾಗುವುದು. ___ ಮರಗಳು, ಬಳ್ಳಿಗಳು, ವಾತಾವರಣವೆಲ್ಲವೂ ರಾತ್ರಿ ನಿಶ್ಚಲವಾಗುತ್ತದೆ. ಪ್ರಾಣಿಗಳಲ್ಲದೆ, ಲೌಕಿಕರಾಗಿ ಜೀವಿಸುವವರವರನ್ನೂ, ನಿದ್ದೆ ಜಯಿಸುತ್ತದೆ. ಈ ಕಾರಣದಿಂದ, ವಾತಾವರಣದಲ್ಲಿ ಲೌಕಿಕ ವಿಚಾರಗಳ ತರಂಗಗಳು ಕಮ್ಮಿಯಾಗುತ್ತದೆ. ರಾತ್ರಿಯ ಅಂತಿಮ ಜಾವದಲ್ಲಿ ಹೂವುಗಳು ಅರಳುವುದು. ವಾತಾವರಣದಲ್ಲಿ ಆಗ ಒಂದು ವಿಶೇಷ […]

ಪ್ರಶ್ನೆ: ದೇವರ ಕೃಪೆಗೂ, ಮಹಾತ್ಮರ ಕೃಪೆಗೂ ಏನು ವ್ಯತ್ಯಾಸ ? “ಆತ್ಮಕ್ಕೆ ಭೇದವಿಲ್ಲ. ಅದು ಎಲ್ಲರಲ್ಲೂ ಒಂದೇ. ಮಹಾತ್ಮರು ಆತ್ಮದ ಸ್ವರೂಪವನ್ನು ತಮ್ಮ ಅರಿವಿನ ಸ್ತರಕ್ಕೆ ತರುತ್ತಾರೆ, ಅಷ್ಟೆ. ನಾವೆಲ್ಲರೂ ಕನ್ನಡಿಗಳು. ಆದರೆ ನಮ್ಮಲ್ಲ್ಲಿ ಪಾದರಸವಿಲ್ಲ. ಮಹಾತ್ಮರ ತಪಸ್ಸಿನಿಂದ ಪಾದರಸ ಉದ್ಭವವಾಗುತ್ತದೆ. ಪಾದರಸವಿರುವ ಕನ್ನಡಿಯಲ್ಲಿ ತಾನೇ ಸ್ಪಷ್ಟವಾದ ಪ್ರತಿಬಿಂಬ ಕಾಣಿಸುವುದು ? ಒಬ್ಬ ಮಹಾತ್ಮನೆದುರಿಗೆ ಹೋದಾಗ ನಮ್ಮ ನಿಜವಾದ ಸ್ವರೂಪ ಅವರಲ್ಲಿ ಪ್ರತಿಫಲಿಸಿ ಕಾಣಲು ಸಾಧ್ಯವಾಗುತ್ತದೆ. ಅದನ್ನು ನೋಡಿ ನಮ್ಮ ಕುರೂಪವನ್ನೂ ಮಲಿನತೆಗಳನ್ನೂ ತೊರೆಯಲು ಸಾಧ್ಯವಾಗುತ್ತದೆ. ಕರೆಂಟು […]

ಪ್ರಶ್ನೆ: ಈ ಲೋಕದಲ್ಲಿ ಎಷ್ಟೋ ಜನರು ಕಷ್ಟ ಪಡುತ್ತಾರೆ; ಉಪವಾಸ ಅಲೆಯುತ್ತಾರೆ. ಇನ್ನು ಕೆಲವರು ಹಣವಂತರಾಗಿ ಸುಖ ಅನುಭವಿಸುತ್ತಾರೆ. ದೇವರು ಕರುಣಾಮಯನೆಂದು ಹೇಳುತ್ತಾರೆ. ಆದರೆ ಅವನ ಕೆಲವು ವಿಷಯಗಳನ್ನು ನೋಡುವಾಗ ಎದ್ದು ಕಾಣುವುದು ಕರುಣೆಯಲ್ಲ, ಕ್ರೂರತನ. ಮಕ್ಕಳೇ, ತಪ್ಪು ದೇವರದಲ್ಲ. ದೇವರು ಕರುಣಾಮಯನೆ. ಮಕ್ಕಳೇ, ನಮ್ಮ ತಾಯಿ ನಮ್ಮನ್ನು ಹೆರುತ್ತಾಳೆ; ಬೆಳೆಯಬೇಕಾದ ಮಾರ್ಗವನ್ನೂ ನಮಗೆ ಹೇಳಿ ಕೊಡುತ್ತಾಳೆ. ಅದನ್ನನುಸರಿಸದಿದ್ದರೆ ನಮ್ಮ ಬೆಳವಣಿಗೆ ಕುಂಠಿತವಾಗುತ್ತದೆ. ಹಾಗೆಂದು ದೇವರ ಮೇಲೆ ಕ್ರೂರತನದ ಆರೋಪಣೆ ಮಾಡುವುದೆಂದರೆ ಅದು ನಮ್ಮತಾಯಿಯ ಮೇಲೆ ಅಪವಾದ […]