ಪ್ರಶ್ನೆ: ಅಮ್ಮಾ, ಇಷ್ಟರೂಪವನ್ನು ಎಲ್ಲಿಟ್ಟುಕೊಂಡು ಧ್ಯಾನ ಮಾಡಬೇಕು ? “ಮಕ್ಕಳೇ, ಇಷ್ಟದೇವತೆಯನ್ನು ಹೃದಯಕಮಲದಲ್ಲೋ ಭ್ರೂಮಧ್ಯದಲ್ಲೋ ಇಟ್ಟುಕೊಂಡು ಧ್ಯಾನ ಮಾಡಬಹುದು. ಗೃಹಸ್ಥರು ಹೃದಯಕಮಲದಲ್ಲಿ ಧ್ಯಾನ ಮಾಡುವುದು ಉತ್ತಮ. ಭ್ರೂಮಧ್ಯದಲ್ಲಿ ಧ್ಯಾನ ಮಾಡುವುದೂ ಉತ್ತಮವೇ. ಆದರೆ ಅದು ಗುರುವಿನ ಮಾರ್ಗದರ್ಶನ ಇದ್ದರೆ ಮಾತ್ರ. ಭ್ರೂಮಧ್ಯದಲ್ಲಿ ಧ್ಯಾನ ಮಾಡುವಾಗ ಕೆಲವರಿಗೆ ತಲೆ ಬಿಸಿಯಾಗುವುದೋ, ನಿದ್ದೆ ತೀರ ಇಲ್ಲದಾಗುವುದೋ ಆಗಬಹುದು. ಇದು ರೋಗವೆಂದು ತಪ್ಪು ಅಭಿಪ್ರಾಯ ಉಂಟಾಗಬಹುದು. ಆದಕಾರಣ ಗುರುವಿಲ್ಲದೆ ಧ್ಯಾನ ಮಾಡುವವರು ವಿಶೇಷ ಜಾಗ್ರತೆ ವಹಿಸಬೇಕು.” ಪ್ರಶ್ನೆ: ಅಮ್ಮಾ, ಎಷ್ಟು ಸಮಯ […]
Category / ಅಮ್ಮನ ಸಂದೇಶ
ಪ್ರಶ್ನೆ: ಮಾತುಗಳಿಂದ ಮನುಷ್ಯನ ಸ್ವಭಾವ ಬದಲಿಸಲು ಸಾಧ್ಯವೇ ? “ಖಂಡಿತವಾಗಿಯೂ ಸಾಧ್ಯ. ಮಕ್ಕಳೇ, ಒಮ್ಮೆ ಒಂದು ದೇವಾಲಯದಲ್ಲಿ ಒಬ್ಬ ಬ್ರಾಹ್ಮಣನು ಕೆಲವು ಹುಡುಗರಿಗೆ ಆಧ್ಯಾತ್ಮಿಕ ಕಲಿಸುತಿದ್ದನು. ಆಗ ಆ ರಾಜ್ಯದ ರಾಜನು ಅಲ್ಲಿ ಬಂದು ಮುಟ್ಟಿದ. ಮಕ್ಕಳಿಗೆ ಕಲಿಸುವುದರಲ್ಲೇ ಮಗ್ನನಾಗಿದ್ದ ಬ್ರಾಹ್ಮಣನಿಗೆ ರಾಜನು ಬಂದದ್ದು / ಬಂದಿರುವುದು ಗೊತ್ತಾಗಲಿಲ್ಲ. ರಾಜನಿಗೆ ಕೋಪ ಬಂದು ಬ್ರಾಹ್ಮಣನಲ್ಲಿ ಕೇಳಿದ, “ಯಾಕಾಗಿ ನಾನು ಬಂದಾಗ ನೀವು ಗಮನಿಸದಿರುವುದು ?” “ನಾನು ಮಕ್ಕಳಿಗೆ ಓದಿಸುತ್ತಾ ಇದ್ದೆ. ಹಾಗಾಗಿ ತಾವು ಬಂದಿದ್ದು ನೋಡಲಿಲ್ಲ,” ಎಂದು […]
ನಮಗೆ ಸದಾ ದುಃಖ ಮಾತ್ರವೇ ಇರುವುದು. ನಿತ್ಯಾನಿತ್ಯ ಏನೆಂಬುದರ ಅರಿವಿಲ್ಲದಿರುವುದರಿಂದ, ನಮ್ಮ ಆಸೆಗಳು ಶಾಶ್ವತವಾದವುಗಳಿಗೆ ಅಲ್ಲವಾದ್ದರಿಂದ ನಾವು ಹೀಗೆ ದುಃಖಿಗಳಾಗಿದ್ದೇವೆ. ಈ ದುಃಖದಿಂದಾಗಿ ಉರಿದುರಿದು ನಾವು ರೋಗಿಗಳಾಗುತ್ತೇವೆ; ನಮ್ಮ ಆಯುಷ್ಯವೂ ಕ್ಷೀಣಿಸುತ್ತದೆ. ಪ್ರೀತಿಯ ಮಕ್ಕಳೇ, ನಮ್ಮ ಕೆಲಸಗಳನ್ನು ನಾವು ಚೆನ್ನಾಗಿ ಮಾಡುತ್ತಿರುತ್ತೇವೆ. ಎಲ್ಲಿ ಹೋದರೂ ಅಲ್ಲಿಯ ದೋಷಗಳನ್ನು, ಕುಂದು ಕೊರತೆಗಳನ್ನು ನಾವು ಕಂಡು ಹಿಡಿಯುತ್ತೇವೆ; ನಮ್ಮ ಮನಸ್ಸು ಅಸ್ವಸ್ಥವಾಗುತ್ತದೆ. ಈ ದೃಷ್ಟಿಕೋನವಲ್ಲ ನಮಗೆ ಬೇಕಾಗಿರುವುದು. ಒಂದು ಕಡೆ ಏನು ಕಾಣಲಿಲ್ಲ ಎಂಬುದನ್ನು ಮರೆತು, ನಮಗೆ ಬೇಕಾದದ್ದು ಅಲ್ಲಿ […]
ಹಿಂದಿನ ಕಾಲದಲ್ಲೆಲ್ಲ ಕಾಡು ಹೊರಗಿರುತ್ತಿತ್ತು. ಈಗ ಕಾಡನ್ನು ಕಡಿದು ಸವರಿ ನಮ್ಮೊಳಗೇ ತಂದಿದ್ದೇವೆ. ಹಿಂದೆ ಪ್ರಾಣಿಗಳು ಹೊರಗಿರುತ್ತಿದ್ದವು. ಇಂದು ಅವುಗಳನ್ನೂ ಆಂತರ್ಯದಲ್ಲಿ ತಂದಿದ್ದೇವೆ. ಹೃದಯದ ಕಲ್ಮಶಗಳನ್ನು ನಾವು ಶೇವ್ ಮಾಡಿ ತೆಗೆಯಬೇಕಾದದ್ದು; ಬದಲಿಗೆ ನಮ್ಮ ಮುಖದ್ದು ಅಲ್ಲ. ಮಕ್ಕಳು ಏನೂ ತ್ಯಜಿಸಬೇಕೆಂದು ಅಮ್ಮ ಹೇಳುತ್ತಿಲ್ಲ. ಅನ್ಯರಲ್ಲಿ ಕರುಣೆ ತೋರಿಸಿದಾಗ, ಸ್ವಾರ್ಥ ತಾನಾಗಿಯೇ ಬಿಟ್ಟು ಹೋಗುತ್ತದೆ. ನೀವು ಒಂದು ದಿನಕ್ಕೆ ಹತ್ತು ರುಪಾಯಿ ಸಿಗರೇಟು ಸೇದುತ್ತೀರ ಎಂದು ಇಟ್ಟುಕೊಳ್ಳೋಣ. ತಿಂಗಳಿಗೆ ಮುನ್ನೂರು ರುಪಾಯಿ ಆಯಿತು. ಈ ತರಹ ಲೆಕ್ಕ […]
ಒಂದು ಊರಿನಲ್ಲಿ ಒಳ್ಳೆಯವರಾದ ಇಬ್ಬರು ವ್ಯಕ್ತಿಗಳಿದ್ದರೆ ಸಾಕು, ಎಷ್ಟೊ ಜನರನ್ನು ಪರಿವರ್ತಿಸಲು ಸಾಧ್ಯವಿದೆ. ಇವತ್ತಿನ ಎರಡೂ ತಲೆಮಾರುಗಳು ನಶಿಸಿ ಹೋಗುತ್ತಿವೆ. ಯುವಕರು ಹೆಂಡಕ್ಕೂ, ಗಾಂಜಕ್ಕೂ, ಹೆಣ್ಣಿಗೂ ಅಡಿಯಾಳಾಗಿ ಸ್ವತಃ ಅಧೋಗತಿಗಿಳಿದಿದ್ದಾರೆ. ಅವರಿಗೆ ಅದರಲ್ಲಿ ಆನಂದ ದೊರಕುವುದಾದರೆ ಅವುಗಳನ್ನು ಉಪೇಕ್ಷಿಸಬೇಕೆಂದು ಅಮ್ಮ ಹೇಳುತ್ತಿಲ್ಲ. ಒಂದು ವರ್ಷವೆಲ್ಲ ಸೇದಿದ ನಂತರ ಮುಂದಿನ ವರ್ಷ ಅದರ ಎರಡು ಪಟ್ಟು ಸೇದಬೇಕಾಗುತ್ತದೆ; ಅಂದರೆ ಮಾತ್ರ ಮೊದಲು ಸಿಕ್ಕಿದಷ್ಟು ಆನಂದ ಸಿಗುವುದು. ನಾಲ್ಕೈದು ವರ್ಷಗಳು ಕಳೆದ ಮೇಲೆ ಎಷ್ಟೇ ಸೇದಿದರೂ ಏನೂ ಅನಿಸುವುದಿಲ್ಲ. ಕಡೆಗೆ […]

Download Amma App and stay connected to Amma