“ಒಬ್ಬರ ಕೋಪ ಮತ್ತು ಅವಿವೇಕದಿಂದ ಉಂಟಾಗುವ ತೊಂದರೆಯನ್ನು, ಮತ್ತೊಬ್ಬರ ಸಹನೆ, ನಮ್ರತೆ ಮತ್ತು ಶಾಂತತೆಗಳು ಸರಿದೂಗಿಸುತ್ತವೆ.” ಒಂದು ಕುಟುಂಬದಲ್ಲಿನ ಎಲ್ಲ ಸದಸ್ಯರು ಒಂದೇ ಸ್ವಭಾವದವರಾಗಿರಬೇಕು ಎಂಬುದಿಲ್ಲ. ಅಲ್ಲಲ್ಲಿ ಹಠಮಾರಿ, ಅವಿವೇಕಿ ಮತ್ತು ಕೋಪಿಷ್ಠನಾದ ವ್ಯಕ್ತಿಯೂ ಇರಬಹುದು. ಆದರೆ, ಅದೇ ಕುಟುಂಬದಲ್ಲಿ ಸಾತ್ವಿಕ, ಶಾಂತ ಮತ್ತು ವಿವೇಕದಿಂದ ಆಲೋಚಿಸಿ ಎಚ್ಚರಿಕೆಯಿಂದ ಕಾರ್ಯಗಳನ್ನು ಮಾಡುವ ವ್ಯಕ್ತಿಯೂ ಇರಬಹುದು. ಈ ಇಬ್ಬರಲ್ಲಿ ಯಾರು ಆ ಕುಟುಂಬದಲ್ಲಿ ಐಕ್ಯತೆ ಮತ್ತು ಸಾಮರಸ್ಯವನ್ನು ಕಾಪಾಡುತ್ತಾರೆ? ಖಂಡಿತವಾಗಿ ಎರಡನೆಯ ವ್ಯಕ್ತಿಯೇ. ಅವರ ವಿವೇಕ, ನಮ್ರತೆ ಮತ್ತು […]
Category / ವಾರ್ತೆ
ಭಾರತದ ಸಂಪತ್ತೆಂದರೆ ಪ್ರೇಮ. ಜೀವನದ ಅಡಿಪಾಯ ಪ್ರೇಮವಾಗಿದೆ. ಇಂದು ನಾವು ಅನುಭವಿಸುತ್ತಿರುವ ದೈಹಿಕ ಮತ್ತು ಮಾನಸಿಕ ಸಮಸ್ಯೆಗಳಲ್ಲಿ ಶೇಕಡಾ ತೊಂಬತ್ತು ಭಾಗ ಆಗಿಹೋದ ದುಃಖ ಮತ್ತು ನೋವುಗಳಿಂದ ಉಂಟಾಗಿವೆ. ಇಂತಹ ಗುಣವಾಗದ ಅನೇಕ ಗಾಯಗಳೊಂದಿಗೆ ಪ್ರತಿಯೊಬ್ಬರೂ ಇಂದು ಜೀವಿಸುತ್ತಿದ್ದಾರೆ. ಇಂತಹ ಗಾಯಗಳನ್ನು ಗುಣಪಡಿಸಲು ವೈದ್ಯಶಾಸ್ತ್ರದಲ್ಲಿ ಯಾವುದೇ ಚಿಕಿತ್ಸೆಯನ್ನು ಕಂಡುಹಿಡಿಯಲಾಗಿಲ್ಲ. ಆದರೆ ಇದಕ್ಕೊಂದು ಪರಿಹಾರವಿದೆ. ಪರಸ್ಪರ ಹೃದಯವನ್ನು ತೆರೆಯಿರಿ. ಭಾವನೆಗಳನ್ನು ಹಂಚಿಕೊಳ್ಳಿರಿ. ಒಬ್ಬರ ಕೊರತೆಯನ್ನು ತುಂಬಲು ಇನ್ನೊಬ್ಬರು ಪ್ರಯತ್ನಿಸಬೇಕು. ಮಕ್ಕಳೇ, ಪರಸ್ಪರ ವಿಶ್ವಾಸ ಮತ್ತು ಪ್ರೀತಿ ಬೆಳೆದಾಗ ನಮ್ಮ […]
ಅಮ್ಮನ ಬಳಿ ವಿವಿಧ ಸ್ವಭಾವದ ಅನೇಕ ಜನರು ಬರುತ್ತಾರೆ. ಅನೇಕ ಕುಟುಂಬ ಸಮಸ್ಯೆಗಳು ಸಣ್ಣ ವಿಷಯಗಳಿಂದ ಶುರುವಾಗುತ್ತವೆ. ಜೀವನವು ಸಮಸ್ಯೆಗಳಿಂದ ತುಂಬಿದೆ. ಸ್ವಲ್ಪ ತಾಳ್ಮೆ ಇದ್ದರೆ, ನಾವು ಅನೇಕ ಸಮಸ್ಯೆಗಳನ್ನು ತಪ್ಪಿಸಬಹುದು. ಒಮ್ಮೆ ಪತಿ ಪತ್ನಿಯರು ಅಮ್ಮನ ಬಳಿಗೆ ಬಂದರು. ಹೆಂಡತಿಗೆ ಕೆಲವೊಮ್ಮೆ ಮಾನಸಿಕ ಸಮತೋಲನ ಸ್ವಲ್ಪ ತಪ್ಪುತ್ತಿತ್ತು. ಯಾವುದಾದರೂ ಒತ್ತಡ ಉಂಟಾದಾಗ ಇದು ಸಂಭವಿಸುತ್ತಿತ್ತು. ಆಗ ಅವರು ಏನು ಹೇಳುತ್ತಿದ್ದಾರೆಂದು ಅವರಿಗೇ ತಿಳಿಯುತ್ತಿರಲಿಲ್ಲ. ಆದರೆ ಅವರಿಗೆ ಗಂಡನ ಮೇಲೆ ಬಹಳ ಪ್ರೀತಿಯಿತ್ತು. ಇದನ್ನು ತಿಳಿದುಕೊಂಡು, ಅಮ್ಮ […]
ನೀನು ಜಗತ್ತಿನಲ್ಲಿ ಬಾಳು, ಕೆಲಸ ಮಾಡು, ಸುಖಗಳನ್ನು ಅನುಭವಿಸು; ಆದರೆ ಒಂದು ವಿಷಯವನ್ನು ಯಾವಾಗಲೂ ನೆನಪಿಡು – ಪ್ರಾಪಂಚಿಕ ಸಂಪಾದನೆ, ಹುಡುಕಾಟ ಮತ್ತು ಶೇಖರಣೆಗಳೆಲ್ಲಾ ಬೋಳು ತಲೆಗೆ ಬಾಚಣಿಗೆ ತೆಗೆದಿಟ್ಟುಕೊಂಡಂತೆ. ಮಕ್ಕಳು ಕೇಳಬಹುದು, “ಇದರ ಅರ್ಥ ಜಗತ್ತನ್ನು ತ್ಯಜಿಸಿ, ಕಾಡಿಗೆ ಹೋಗಿ, ಕಣ್ಣುಮುಚ್ಚಿ ಕೂತಿರಬೇಕೆಂದೇ ?” ಅಲ್ಲ. ಜಗತ್ತನ್ನು ತ್ಯಜಿಸಬೇಕೆಂದೂ ಅಲ್ಲ. ಆದರೆ ಆಲಸ್ಯ ಮತ್ತು ಅಜ್ಞಾನ ಸರಿಯಲ್ಲ. ಯಾವುದೇ ಕಾಲದಲ್ಲಿ, ಹೇಗೇ ಬದುಕಿದರೂ, ಸಮಯ ಬಂದಾಗ ಸಾವು ಬಂದೇ ಬರುತ್ತದೆ. ಎಲ್ಲವನ್ನೂ ನಾವು ಕ್ಷಣಮಾತ್ರದಲ್ಲಿ ಕಳೆದುಕೊಳ್ಳಬಹುದು, […]
ಎಲ್ಲವೂ ನಮ್ಮ ಇಚ್ಛೆಗೆ ಅನುಗುಣವಾಗಿ ನಡೆಯುವುದಿಲ್ಲ ಎಂದು ಅರ್ಥಮಾಡಿಕೊಳ್ಳಬೇಕು. ಹತ್ತು ಮೊಟ್ಟೆಗಳನ್ನು ಮರಿಗಳಾಗಲು ಇಟ್ಟರೆ, ಹತ್ತೂ ಮೊಟ್ಟೆಗಳು ಮರಿಗಳಾಗುವುದಿಲ್ಲ. ನಮ್ಮ ಇಚ್ಛೆಯಂತೆ ನಡೆದರೆ, ಆ ಎಲ್ಲಾ ಮೊಟ್ಟೆಗಳೂ ಮರಿಗಳಾಗಬೇಕು. ಅದು ಸಾಧ್ಯವಿಲ್ಲ. ಆದ್ದರಿಂದ ಎಲ್ಲವನ್ನೂ ಅವನ ಇಚ್ಛೆಗೆ ಬಿಟ್ಟುಕೊಡುವ ಶರಣಾಗತ ಮನೋಭಾವ ನಮ್ಮೊಳಗೆ ಬೆಳೆಯಬೇಕು. ಅದೇ ನಮ್ಮ ಜೀವನದ ಧ್ಯೇಯವಾಗಿರಬೇಕು. ಕೆಲವರು ಕೇಳಬಹುದು, “ನಿಮ್ಮ ಕೃಷ್ಣನು ‘ವೇತನ ಬಯಸದೆ ಕೆಲಸ ಮಾಡು’ ಎಂದು ಹೇಳುತ್ತಾನೆ ಅಲ್ಲವೇ?” ಇದು ಎಂದಿಗೂ ಸರಿಯಲ್ಲ. ಕರ್ಮ ಮಾಡಿದಾಗ ನಾವು ನಿರೀಕ್ಷಿಸಿದಂತೆ ಫಲ […]

Download Amma App and stay connected to Amma