ನಿಷ್ಕಾಮ ಸೇವೆಯಿಂದಾಗಿ ನಮಗೆಯೇ ಆನಂದ. ಅನೇಕ ದಿನಗಳಿಂದ ಉಪವಾಸವಿರುವ ಮನೆ; ಹಸಿವೆಯಿಂದ ಮಕ್ಕಳಿಗೆ ಕೂಗಲೂ ತ್ರಾಣವಿಲ್ಲದಾಗಿದೆ. ತಂದೆ ತಾಯಿ ಸೇರಿ ತಿರುಪೆ ಎತ್ತಲಿಕ್ಕೆ ತೊಡಗಿದರು. ಸಿಗುವ ಆಹಾರವೋ ಬಹಳ ಕಮ್ಮಿ. ಮಕ್ಕಳಿಗೆ ಏನೂ ಸಾಲದು. ಅದನ್ನು ಅವರು ಮಕ್ಕಳಿಗೆ ಹಂಚುತ್ತಾರೆ. ತಮ್ಮ ಮಕ್ಕಳು ಅದನ್ನು ಉಣ್ಣುವುದನ್ನು ನೋಡುವಾಗ ಆ ತಂದೆಗೂ ತಾಯಿಗೂ ಅರ್ಧ ಹೊಟ್ಟೆ ತುಂಬುವುದು. ಈ ತೆರನ ಒಂದು ಹೊಣೆಗಾರಿಕೆಯನ್ನು ನಾವು ಜಗತ್ತಿನಲ್ಲಿ ಸೃಷ್ಟಿಸಬೇಕು. ನಮಗೆಯೇ ಅದರಿಂದ ಆನಂದವಾಗುವುದು. ಹೂವನ್ನು ದೇವರಿಗೆ ಕೊಯ್ಯುವಾಗ ಅದರ ಸುಗಂಧವನ್ನೂ […]