Tag / ತಪಸ್ಸು

ಪ್ರಶ್ನೆ: ಜನಗಳ ಸೇವೆ ಮಾಡಲು ತಪಸ್ಸಿನ ಅವಶ್ಯಕತೆಯೇನು ? ಮಕ್ಕಳೇ, ಕಲಿತವನಿಗೆ ಮಾತ್ರವೇ ಇನ್ನುಳಿದವರಿಗೆ ಕಲಿಸಲು ಸಾಧ್ಯ. ಇಂದು ನಮ್ಮ ರಾಗಾದಿ ವೈರಿಗಳು ಯಾವುವೂ ಬಿಟ್ಟು ಹೋಗಿಲ್ಲ. ಯಾರಾದರೂ ದ್ವೇಷಿಸಿದರೆ, ನಾವು ಕಲಿತಿರುವುದು ಅವರನ್ನು ಇಮ್ಮಡಿ ದ್ವೇಷಿಸಲಿಕ್ಕೆ. ಇನ್ನಿತರರ ಒಂದು ಮಾತಿನ ಮೇಲಿದೆ ಇಂದು ನಮ್ಮ ಜೀವನ. ನಮ್ಮ ಬಗ್ಗೆ ಏನಾದರೂ ಹೇಳಿದರು ಎಂದು ಕೇಳಿದರೆ ಸಾಕು, ಒಂದೇ ಹೋಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ, ಇಲ್ಲವೇ ಹೇಳಿದವನನ್ನು ತಿವಿದು ಇರಿಯುತ್ತೇವೆ. ಬೇರೆಯವರ ಬಾಯಿಯ ಎರಡಕ್ಷರಗಳನ್ನು ಹಿಡಿದು ಕೊಂಡು ನಾವಿಂದು […]

ಪ್ರಶ್ನೆ: ಅಮ್ಮಾ, ಪ್ರಾರ್ಥನೆ ಹೇಗಿರಬೇಕು ? “ಲೋಕದ ಏಳಿಗೆಗಾಗಿ ಮಾಡುವ ಪ್ರಾರ್ಥನೆಯೇ ಅತ್ಯಂತ ಶ್ರೇಷ್ಟವಾದದ್ದು. ಆಸೆವಿಹೀನ ನಿಷ್ಕಾಮ ಪ್ರಾರ್ಥನೆ – ಅದುವೇ ಬೇಕಾಗಿರುವುದು. ’ದೇವರೇ, ಲೋಕದ ಕಷ್ಟಗಳನ್ನು ನಿವಾರಿಸು. ದೇವರೇ, ಎಲ್ಲರಿಗೂ ಒಳ್ಳೆಮನಸ್ಸನ್ನು ದಯಪಾಲಿಸು. ದೇವರೇ, ಎಲ್ಲರನ್ನೂ ಕಾಪಾಡು’ ಹೀಗೆ ಪ್ರಾರ್ಥಿಸಿರಿ ಮಕ್ಕಳೇ. ಪೂಜೆಗಾಗಿ ಹೂಗಳನ್ನು ಕೊಯ್ಯುತ್ತೇವೆ. ಆ ಹೂವಿನ ಸೊಬಗನ್ನೂ, ಸುಗಂಧವನ್ನೂ ನಮಗೆ ಅರಿವಿಲ್ಲದೆಯೂ ಮೊದಲು ಆಸ್ವಾದಿಸುವವರು ನಾವೆಯೇ. ’ಲೋಕಕ್ಕೆ ಒಳಿತು ಮಾಡು’ ಎಂದು ಪ್ರಾರ್ಥಿಸುವಾಗ ಸ್ವತಃ ನಾವೇ ಒಳ್ಳೆಯವರಾಗುತ್ತೇವೆ. ದೇವರಿಗೆ ಮಾಡುವ ಸೇವೆ, ಲೋಕಕ್ಕೆ […]

ಪ್ರಶ್ನೆ: ತಪಸ್ಸಿನಿಂದ ಶಕ್ತಿ ಹೇಗೆ ಉಂಟಾಗುತ್ತದೆ ? “ಒಂಬತ್ತು ಕವಲುಗಳಿರುವ ಒಂದು ನದಿಯಿದೆ. ಅದರ ಪ್ರವಾಹಕ್ಕೆ ಬಲವಿಲ್ಲ. ಆದರೆ ಆ ಒಂಬತ್ತು ಕವಲುಗಳನ್ನು ಮುಚ್ಚಿ ನದಿಯಲ್ಲಿ ಮಾತ್ರ ನೀರು ಹರಿಯಲು ಬಿಟ್ಟರೆ, ಪ್ರವಾಹ ಶಕ್ತಿಶಾಲಿಯಾಗುತ್ತದೆ. ಆ ಶಕ್ತಿಯಿಂದಲೇ ಕರೆಂಟ್ ಉತ್ಪಾದಿಸುತ್ತಾರೆ. ಇದೇ ತರ ನಿಮ್ಮ ಆಲೋಚನೆಗಳನ್ನು, ಬಹುಮುಖವಾಗಿ ಹಾರುವ ಮನಸ್ಸನ್ನು, ಏಕತ್ವದಲ್ಲಿ ಕೇಂದ್ರೀಕರಿಸಿದರೆ, ನಿಮ್ಮಲ್ಲಿ ನಿಶ್ಚಯವಾಗಿಯೂ ಈ ಶಕ್ತಿ ಉಂಟಾಗುತ್ತದೆ. ಇತರರಿಗೆ ಶರೀರ ಮೂಲಕವೂ, ಮನಸ್ಸು ಮೂಲಕವೂ, ಬುದ್ಧಿ ಮೂಲಕವೂ, ಪ್ರವೃತ್ತಿ ಮೂಲಕವೂ, ಮಾತು ಮೂಲಕವೂ, ಈ […]

ಪ್ರಶ್ನೆ: ಅಮ್ಮಾ, ಪಿತೃಕರ್ಮಕ್ಕೆ ಫಲಪ್ರಾಪ್ತಿಯಿದೆಯೇ ? ಮಕ್ಕಳೇ, ಶುದ್ಧ ಸಂಕಲ್ಪಕ್ಕೆ ದೊಡ್ಡ ಶಕ್ತಿಯಿದೆ. ಕರ್ಮ ಫಲಿಸಲೇ ಬೇಕೆಂದಿದ್ದರೆ ಶುದ್ಧ ಸಂಕಲ್ಪ ಬೇಕು. ಪಿತೃಕರ್ಮ ನಡೆಸುವಾಗ ಸತ್ತ ವ್ಯಕ್ತಿಯ ದಿನ, ನಾಮ ರೂಪ, ಭಾವಗಳನ್ನೆಲ್ಲ ಚಿಂತಿಸಿ ಮನಸ್ಸಲ್ಲಿ ಮಾತ್ರ ಜಪ ಮಾಡುತ್ತಾರೆ. ಮಕ್ಕಳೇ, ಪ್ರತಿಯೊಂದು ಕರ್ಮಕ್ಕೂ ಒಂದೊಂದು ದೇವತೆಯಿದೆ. ಪರ್ಶಿಯದಲ್ಲಿರುವ ಮಗನ ಕಾಗದ ಊರಲ್ಲಿರುವ ತಂದೆಗೂ ತಾಯಿಗೂ ಪೋಸ್ಟ್ ಮ್ಯಾನ್ ವಿಳಾಸ ತಪ್ಪದೆ ತಲಪಿಸುವುದಿಲ್ಲವೆ ? ಆದರೆ ಇದು ಖಂಡಿತ: ಸಂಕಲ್ಪ ಶುದ್ಧವಾಗಿದ್ದರೆ ಮಾತ್ರ ದೇವತೆಗಳು ಆಯಾಯ ಕರ್ಮದ […]

ಕೆಲಸಗಳನ್ನೆಲ್ಲ ಮಾಡಲಿಕ್ಕೆ ಯಂತ್ರಗಳನ್ನು ಕಂಡು ಹಿಡಿದಿರುವುದರಿಂದ ಇವತ್ತು ಮನುಷ್ಯನಿಗೆ ಒಂದು ಗಂಟೆಯಷ್ಟು ಕೂಡಾ ಕೆಲಸವಿಲ್ಲ. ಸಮಯ ಪೂರ್ತಿ ಮನಸ್ಸು ಬಣಗುಟ್ಟುತ್ತಿರುತ್ತದೆ. ದುರಾಲೋಚನೆಗಳೂ ದುಷ್ಪ್ರವೃತ್ತಿಗಳೂ ಹುಟ್ಟುವುದು ಆಗ. ನಿಮಗೆ ಸಿಗುವ ಸಮಯ ಪೋಲು ಮಾಡದೆ ಸಾಧನೆ ಮಾಡಿದರೆ ಮನಸ್ಸು ಭ್ರಷ್ಟವಾಗುವುದಿಲ್ಲ; ಅನೇಕರಿಗೆ ಸಹಾಯಕವಾಗುವುದು. ಸಯನ್ಸ್ ಈಗ ಕಂಡು ಹಿಡಿದಿರುವಂಥವುಗಳೋ, ಇನ್ನು ಕಂಡು ಹಿಡಿಯಲಿರುವಂಥವುಗಳೋ, ಯಾವುವೂ ನಿಮಗೆ ಸಮಾಧಾನ ಕೊಡಲು ಸಾಧ್ಯವಿಲ್ಲ. ಅದನ್ನೇನೂ ಅಮ್ಮ ತಪ್ಪೆಂದು ಹೇಳುವುದಿಲ್ಲ. ಇದೆಲ್ಲ ಕಂಡು ಹಿಡಿಯುವ ಕಾರಣ ಹತ್ತು ಜನ ಮಾಡುವ ಕೆಲಸಕ್ಕೆ ಇಬ್ಬರು […]