Tag / ಪ್ರೇಮ

ಮೇರೆ ಇಲ್ಲದ, ಭೇದವಿಲ್ಲದ ಅಖಂಡವಾದ ಏಕತ್ವವೇ ಭಗವಂತ. ಆ ಭಗವತ್ದಶಕ್ತಿಯು ಪ್ರಕೃತಿಯಲ್ಲಿ, ಪರಿಸರದಲ್ಲಿ, ಮೃಗಗಳಲ್ಲಿ, ಮನುಷ್ಯರಲ್ಲಿ, ಗಿಡಗಳಲ್ಲಿ, ಮರಗಳಲ್ಲಿ, ಪಕ್ಷಿಗಳಲ್ಲಿ ಪ್ರತಿಯೊಂದು ಕಣಕಣದಲ್ಲಿಯೂ ತುಂಬಿತುಳುಕುತ್ತಿದೆ. ಜಡ ಚೈತನ್ಯಗಳೆಲ್ಲವೂ ಭಗವತ್ದಮಯವಾಗಿದೆ. ಈ ಸತ್ಯವನ್ನು ಅರಿತರೆ ನಮಗೆ ನಮ್ಮನ್ನು, ಇತರರನ್ನು, ಈ ಲೋಕವನ್ನು ಪ್ರೇಮಿಸಲು ಮಾತ್ರವೇ ಸಾಧ್ಯ. ಪ್ರೇಮದ ಮೊದಲ ತರಂಗವು ನಮ್ಮಿಂದಲೇ ಪ್ರಾರಂಭವಾಗಬೇಕು. ನಿಶ್ಚಲವಾಗಿರುವ ಸರೋವರದಲ್ಲಿ ಕಲ್ಲೊಂದನ್ನು ಎಸೆದರೆ, ಮೊದಲ ಪುಟ್ಟ ತರಂಗವು ಆ ಕಲ್ಲಿನ ಸುತ್ತಲು ಪ್ರಕಟವಾಗುತ್ತದೆ. ಕ್ರಮೇಣ ಆ ತರಂಗದ ವೃತ್ತವು ದೊಡ್ಡದಾಗುತ್ತಾ ದೊಡ್ಡದಾಗುತ್ತಾ ಅದು […]

ನಿಷ್ಕಾಮ ಸೇವೆಯಿಂದಾಗಿ ನಮಗೆಯೇ ಆನಂದ. ಅನೇಕ ದಿನಗಳಿಂದ ಉಪವಾಸವಿರುವ ಮನೆ; ಹಸಿವೆಯಿಂದ ಮಕ್ಕಳಿಗೆ ಕೂಗಲೂ ತ್ರಾಣವಿಲ್ಲದಾಗಿದೆ. ತಂದೆ ತಾಯಿ ಸೇರಿ ತಿರುಪೆ ಎತ್ತಲಿಕ್ಕೆ ತೊಡಗಿದರು. ಸಿಗುವ ಆಹಾರವೋ ಬಹಳ ಕಮ್ಮಿ. ಮಕ್ಕಳಿಗೆ ಏನೂ ಸಾಲದು. ಅದನ್ನು ಅವರು ಮಕ್ಕಳಿಗೆ ಹಂಚುತ್ತಾರೆ. ತಮ್ಮ ಮಕ್ಕಳು ಅದನ್ನು ಉಣ್ಣುವುದನ್ನು ನೋಡುವಾಗ ಆ ತಂದೆಗೂ ತಾಯಿಗೂ ಅರ್ಧ ಹೊಟ್ಟೆ ತುಂಬುವುದು. ಈ ತೆರನ ಒಂದು ಹೊಣೆಗಾರಿಕೆಯನ್ನು ನಾವು ಜಗತ್ತಿನಲ್ಲಿ ಸೃಷ್ಟಿಸಬೇಕು. ನಮಗೆಯೇ ಅದರಿಂದ ಆನಂದವಾಗುವುದು. ಹೂವನ್ನು ದೇವರಿಗೆ ಕೊಯ್ಯುವಾಗ ಅದರ ಸುಗಂಧವನ್ನೂ […]

ಪರಮಕರುಣಾಕರನಾದ ಪರಮಾತ್ಮನ ಅನುಗ್ರಹದಿಂದ ನಾವು ನಡೆದುಕೊಂಡು ಬರುತ್ತಿದ್ದೇವೆ. ಕೆಲವರು ಹೇಳುತ್ತಾರೆ ದೇವರಿಲ್ಲ ಎಂದು. ತನ್ನ ನಾಲಿಗೆಯಿಂದಲೇ “ನನಗೆ ನಾಲಿಗೆಯಿಲ್ಲ” ಎಂದು ಹೇಳಿದಂತಾಯಿತು ಇದು. ನಾಲಗೆಯಿಲ್ಲದ ಒಬ್ಬನಿಗೆ “ನನಗೆ ನಾಲಿಗೆಯಿಲ್ಲ” ಎಂದು ಹೇಳಲು ಸಾಧ್ಯವಿದೆಯೇ. ಇದೇ ರೀತಿ ದೇವರಿಲ್ಲ ಎಂದು ಹೇಳುವಾಗಲೇ ನಾವು ದೇವರಿದ್ದಾನೆ ಎಂದು ಒಪ್ಪಿದ ಹಾಗಾಯಿತು. ಯಾಕೆಂದರೆ ಒಂದು ವಸ್ತು ಇಲ್ಲಾಂತ ಹೇಳಬೇಕಾದರೆ, ಮೊದಲೇ ಅದರ ಬಗ್ಗೆ ನಮಗೆ ಸ್ವಲ್ಪ ತಿಳುವಳಿಕೆ ಇರಬೇಕಾಗುತ್ತದೆ. ಪ್ರೀತಿಯ ಮಕ್ಕಳೇ, ನಾವು ಬಂದಿರುವುದು ದೇವರಿಂದ. ಆ ಮಸುಕಾದ ಪರಿವೆ ನಮ್ಮೊಳಗಿದೆ; […]

ಹಿಂದಿನ ಕಾಲದಲ್ಲೆಲ್ಲ ಕಾಡು ಹೊರಗಿರುತ್ತಿತ್ತು. ಈಗ ಕಾಡನ್ನು ಕಡಿದು ಸವರಿ ನಮ್ಮೊಳಗೇ  ತಂದಿದ್ದೇವೆ. ಹಿಂದೆ ಪ್ರಾಣಿಗಳು ಹೊರಗಿರುತ್ತಿದ್ದವು. ಇಂದು ಅವುಗಳನ್ನೂ ಆಂತರ್ಯದಲ್ಲಿ ತಂದಿದ್ದೇವೆ. ಹೃದಯದ ಕಲ್ಮಶಗಳನ್ನು ನಾವು ಶೇವ್ ಮಾಡಿ ತೆಗೆಯಬೇಕಾದದ್ದು; ಬದಲಿಗೆ ನಮ್ಮ ಮುಖದ್ದು ಅಲ್ಲ. ಮಕ್ಕಳು ಏನೂ ತ್ಯಜಿಸಬೇಕೆಂದು ಅಮ್ಮ ಹೇಳುತ್ತಿಲ್ಲ. ಅನ್ಯರಲ್ಲಿ ಕರುಣೆ ತೋರಿಸಿದಾಗ, ಸ್ವಾರ್ಥ ತಾನಾಗಿಯೇ ಬಿಟ್ಟು ಹೋಗುತ್ತದೆ. ನೀವು ಒಂದು ದಿನಕ್ಕೆ ಹತ್ತು ರುಪಾಯಿ ಸಿಗರೇಟು ಸೇದುತ್ತೀರ ಎಂದು ಇಟ್ಟುಕೊಳ್ಳೋಣ.  ತಿಂಗಳಿಗೆ ಮುನ್ನೂರು ರುಪಾಯಿ ಆಯಿತು. ಈ ತರಹ ಲೆಕ್ಕ […]

ನಾವು ವ್ಯಕ್ತಿಗಳನ್ನು ಪ್ರೇಮಿಸುವುದೂ, ವಸ್ತುಗಳನ್ನು ಉಪಯೋಗಿಸುವುದೂ ತಾನೆ ಮಾಡ ಬೇಕಾಗಿರುವುದು. ಆದರೆ ಇಂದು ನೇರ ವಿರುದ್ಧ ನಾವು ಮಾಡುತ್ತಿರುವುದು: ವ್ಯಕ್ತಿಗಳನ್ನು ಉಪಯೋಗಿಸುತ್ತೇವೆ; ವಸ್ತುಗಳನ್ನು ಪ್ರೀತಿಸುತ್ತೇವೆ. ಈ ತರ ಆದರೆ ಕುಟುಂಬಗಳ ಅವನತಿಯಾಗುತ್ತದೆ, ಸಮಾಜದ ತಾಳಲಯ ತಪ್ಪುತ್ತದೆ. – ಅಮ್ಮ