Tag / ಬಡತನ

ಪ್ರಶ್ನೆ: ತಪಸ್ಸಿನಿಂದ ಶಕ್ತಿ ಹೇಗೆ ಉಂಟಾಗುತ್ತದೆ ? “ಒಂಬತ್ತು ಕವಲುಗಳಿರುವ ಒಂದು ನದಿಯಿದೆ. ಅದರ ಪ್ರವಾಹಕ್ಕೆ ಬಲವಿಲ್ಲ. ಆದರೆ ಆ ಒಂಬತ್ತು ಕವಲುಗಳನ್ನು ಮುಚ್ಚಿ ನದಿಯಲ್ಲಿ ಮಾತ್ರ ನೀರು ಹರಿಯಲು ಬಿಟ್ಟರೆ, ಪ್ರವಾಹ ಶಕ್ತಿಶಾಲಿಯಾಗುತ್ತದೆ. ಆ ಶಕ್ತಿಯಿಂದಲೇ ಕರೆಂಟ್ ಉತ್ಪಾದಿಸುತ್ತಾರೆ. ಇದೇ ತರ ನಿಮ್ಮ ಆಲೋಚನೆಗಳನ್ನು, ಬಹುಮುಖವಾಗಿ ಹಾರುವ ಮನಸ್ಸನ್ನು, ಏಕತ್ವದಲ್ಲಿ ಕೇಂದ್ರೀಕರಿಸಿದರೆ, ನಿಮ್ಮಲ್ಲಿ ನಿಶ್ಚಯವಾಗಿಯೂ ಈ ಶಕ್ತಿ ಉಂಟಾಗುತ್ತದೆ. ಇತರರಿಗೆ ಶರೀರ ಮೂಲಕವೂ, ಮನಸ್ಸು ಮೂಲಕವೂ, ಬುದ್ಧಿ ಮೂಲಕವೂ, ಪ್ರವೃತ್ತಿ ಮೂಲಕವೂ, ಮಾತು ಮೂಲಕವೂ, ಈ […]

ಹಿಂದಿನ ಕಾಲದಲ್ಲೆಲ್ಲ ಕಾಡು ಹೊರಗಿರುತ್ತಿತ್ತು. ಈಗ ಕಾಡನ್ನು ಕಡಿದು ಸವರಿ ನಮ್ಮೊಳಗೇ  ತಂದಿದ್ದೇವೆ. ಹಿಂದೆ ಪ್ರಾಣಿಗಳು ಹೊರಗಿರುತ್ತಿದ್ದವು. ಇಂದು ಅವುಗಳನ್ನೂ ಆಂತರ್ಯದಲ್ಲಿ ತಂದಿದ್ದೇವೆ. ಹೃದಯದ ಕಲ್ಮಶಗಳನ್ನು ನಾವು ಶೇವ್ ಮಾಡಿ ತೆಗೆಯಬೇಕಾದದ್ದು; ಬದಲಿಗೆ ನಮ್ಮ ಮುಖದ್ದು ಅಲ್ಲ. ಮಕ್ಕಳು ಏನೂ ತ್ಯಜಿಸಬೇಕೆಂದು ಅಮ್ಮ ಹೇಳುತ್ತಿಲ್ಲ. ಅನ್ಯರಲ್ಲಿ ಕರುಣೆ ತೋರಿಸಿದಾಗ, ಸ್ವಾರ್ಥ ತಾನಾಗಿಯೇ ಬಿಟ್ಟು ಹೋಗುತ್ತದೆ. ನೀವು ಒಂದು ದಿನಕ್ಕೆ ಹತ್ತು ರುಪಾಯಿ ಸಿಗರೇಟು ಸೇದುತ್ತೀರ ಎಂದು ಇಟ್ಟುಕೊಳ್ಳೋಣ.  ತಿಂಗಳಿಗೆ ಮುನ್ನೂರು ರುಪಾಯಿ ಆಯಿತು. ಈ ತರಹ ಲೆಕ್ಕ […]

ಮಕ್ಕಳೇ, ಸುತ್ತಲೂ ಒಂದು ಸಲ ದೃಷ್ಟಿ ಹರಿಸಿ ನೋಡಿ. ಅದನ್ನೊಮ್ಮೆ ವಿಷ್ಲೇಶಣೆ ಮಾಡಿ. ಲೋಕದ ಇವತ್ತಿನ ಪರಿಸ್ಥಿತಿ ಏನಂತ ಸ್ವಲ್ಪ ಅರಿತುಕೊಳ್ಳೋಣ. ಅದಕ್ಕೆಂದೇ ಇರುವ ದಿವಸವಿದು. ಜಗತ್ತಿನ ಜನಗಳು ಎಷ್ಟೆಲ್ಲಾ ತರದಲ್ಲಿ ಕಷ್ಟ ಪಡುತ್ತಿದ್ದಾರೆ. ಅವರ ಜೀವನವನ್ನು ನಾವು ಅರ್ಥ ಮಾಡಿಕೊಳ್ಳಬೇಕಾಗುತ್ತದೆ. ಒಂದು ವರ್ಷದ ಹಿಂದೆ ನಡೆದ ಘಟನೆಯೊಂದು ಅಮ್ಮನಿಗೆ ನೆನಪಾಗುತ್ತಿದೆ; ಮುಂಬೈಯಲ್ಲಿನ ಮಕ್ಕಳು ಹೇಳಿ ಗೊತ್ತಾಗಿದ್ದು. ಮುಂಬೈಯಲ್ಲಿ ಒಂದು ಕಡೆ ಒಬ್ಬಾತನಿಗೆ ಷುಗರಿನ ಖಾಯಿಲೆಯಿತ್ತು. ಆ ವ್ಯಕ್ತಿಯ ಕಾಲಲ್ಲಿ ಒಂದು ಗಾಯವಾಗಿ, ಬಲಿತು ದೊಡ್ಡ ಹುಣ್ಣಾಯಿತು. […]