ಪ್ರಶ್ನೆ: ದೇವರ ಕೃಪೆಗೂ, ಮಹಾತ್ಮರ ಕೃಪೆಗೂ ಏನು ವ್ಯತ್ಯಾಸ ? “ಆತ್ಮಕ್ಕೆ ಭೇದವಿಲ್ಲ. ಅದು ಎಲ್ಲರಲ್ಲೂ ಒಂದೇ. ಮಹಾತ್ಮರು ಆತ್ಮದ ಸ್ವರೂಪವನ್ನು ತಮ್ಮ ಅರಿವಿನ ಸ್ತರಕ್ಕೆ ತರುತ್ತಾರೆ, ಅಷ್ಟೆ. ನಾವೆಲ್ಲರೂ ಕನ್ನಡಿಗಳು. ಆದರೆ ನಮ್ಮಲ್ಲ್ಲಿ ಪಾದರಸವಿಲ್ಲ. ಮಹಾತ್ಮರ ತಪಸ್ಸಿನಿಂದ ಪಾದರಸ ಉದ್ಭವವಾಗುತ್ತದೆ. ಪಾದರಸವಿರುವ ಕನ್ನಡಿಯಲ್ಲಿ ತಾನೇ ಸ್ಪಷ್ಟವಾದ ಪ್ರತಿಬಿಂಬ ಕಾಣಿಸುವುದು ? ಒಬ್ಬ ಮಹಾತ್ಮನೆದುರಿಗೆ ಹೋದಾಗ ನಮ್ಮ ನಿಜವಾದ ಸ್ವರೂಪ ಅವರಲ್ಲಿ ಪ್ರತಿಫಲಿಸಿ ಕಾಣಲು ಸಾಧ್ಯವಾಗುತ್ತದೆ. ಅದನ್ನು ನೋಡಿ ನಮ್ಮ ಕುರೂಪವನ್ನೂ ಮಲಿನತೆಗಳನ್ನೂ ತೊರೆಯಲು ಸಾಧ್ಯವಾಗುತ್ತದೆ. ಕರೆಂಟು […]
Tag / ಮಹಾತ್ಮ
ಪ್ರಶ್ನೆ: ಅಮ್ಮಾ, ಕ್ಷೇತ್ರಗಳಲ್ಲಿ ಪೂಜೆ ನಿಲ್ಲಿಸಿದರೆ ಪ್ರತಿಕೂಲ ಪರಿಣಾಮವಾಗುತ್ತದೆಂದು ಹೇಳುತ್ತಾರೆ; ನಿಜವೇ ? “ಮಕ್ಕಳೇ, ಮನುಷ್ಯನ ಸಂಕಲ್ಪದಿಂದಾಗಿ ದೆವತೆಗಳ ಶಕ್ತಿ ವೃದ್ಧಿಯಾಗುತ್ತಿರುತ್ತದೆ. ಪೂಜೆ ನಿಲ್ಲಿಸಿದರೆ, ಅದು ಕ್ಷೀಣಿಸುವುದು. ದೇವರು ಸರ್ವಶಕ್ತನು. ಅವನ ಶಕ್ತಿ ಹೆಚ್ಚಾಗುವುದಿಲ್ಲ; ಕಡಿಮೆಯಾಗುವುದಿಲ್ಲ. ಅದು ನಿತ್ಯವೂ ಶಾಶ್ವತ.ಆದರೆ ದೇವತೆಗಳ ಶಕ್ತಿ ಪ್ರತಿಷ್ಠಾಪನೆ ಮಾಡುವವರ ಭಾವನೆಯನ್ನವಲಂಬಿಸಿದೆ. ಕ್ಷೇತ್ರಗಳಲ್ಲೂ, ಕುಟುಂಬ ದೇವತೆಗಳ ಕ್ಷೇತ್ರಗಳಲ್ಲೂ ಪೂಜೆ ನಿಲ್ಲಿಸಬಾರದು. ನಿಲ್ಲಿಸಿದ್ದಾದರೆ ದೊಡ್ಡ ದೋಷಗಳು ಘಟಿಸಬಹುದು. ” “ಮಕ್ಕಳೇ, ಒಂದು ಕಾಗೆಗೆ ನಾವು ಹತ್ತು ದಿವಸ ಆಹಾರ ಕೊಟ್ಟು ಅಭ್ಯಾಸಮಾಡಿದೆವೆಂದು ಇಟ್ಟುಕೊಳ್ಳೋಣ. […]
ನಿಷ್ಕಾಮ ಸೇವೆಯಿಂದಾಗಿ ನಮಗೆಯೇ ಆನಂದ. ಅನೇಕ ದಿನಗಳಿಂದ ಉಪವಾಸವಿರುವ ಮನೆ; ಹಸಿವೆಯಿಂದ ಮಕ್ಕಳಿಗೆ ಕೂಗಲೂ ತ್ರಾಣವಿಲ್ಲದಾಗಿದೆ. ತಂದೆ ತಾಯಿ ಸೇರಿ ತಿರುಪೆ ಎತ್ತಲಿಕ್ಕೆ ತೊಡಗಿದರು. ಸಿಗುವ ಆಹಾರವೋ ಬಹಳ ಕಮ್ಮಿ. ಮಕ್ಕಳಿಗೆ ಏನೂ ಸಾಲದು. ಅದನ್ನು ಅವರು ಮಕ್ಕಳಿಗೆ ಹಂಚುತ್ತಾರೆ. ತಮ್ಮ ಮಕ್ಕಳು ಅದನ್ನು ಉಣ್ಣುವುದನ್ನು ನೋಡುವಾಗ ಆ ತಂದೆಗೂ ತಾಯಿಗೂ ಅರ್ಧ ಹೊಟ್ಟೆ ತುಂಬುವುದು. ಈ ತೆರನ ಒಂದು ಹೊಣೆಗಾರಿಕೆಯನ್ನು ನಾವು ಜಗತ್ತಿನಲ್ಲಿ ಸೃಷ್ಟಿಸಬೇಕು. ನಮಗೆಯೇ ಅದರಿಂದ ಆನಂದವಾಗುವುದು. ಹೂವನ್ನು ದೇವರಿಗೆ ಕೊಯ್ಯುವಾಗ ಅದರ ಸುಗಂಧವನ್ನೂ […]
ಪ್ರಶ್ನೆ: ಕೃಷ್ಣ ಭಕ್ತನು ದೇವಿಯ ಸಹಸ್ರನಾಮ ಜಪಿಸುವುದು ಒಳ್ಳೆಯದೇ ? “ಯಾರು ಇಷ್ಟದೇವನೋ, ಆ ದೇವನ ಮಂತ್ರ ಜಪಿಸಬೇಕು. ಸಹಸ್ರನಾಮವೂ ಹಾಗೆಯೇ. ಕೋಗಿಲೆಯನ್ನು ನವಿಲೆಂದು ಕರೆದರೆ ಕೋಗಿಲೆ ಬರುವುದೇ ? ಆದರೆ ಒಂದು ಮಾತು. ಪ್ರತಿ ಹಕ್ಕಿಗೂ ನವಿಲೆಂದು, ಕೋಗಿಲೆಯೆಂದು ಅಥವಾ ಬೇರಿನ್ನೇನೋ ಹೆಸರಿಟ್ಟಿರುವುದು ಮನುಷ್ಯನು. ಆದಕಾರಣ ಪ್ರತಿಯೊಂದನ್ನು ನೋಡುವಾಗಲೂ ಅದರ ಹೆಸರು ಹೀಗೆಂದು ನಾವು ಯೋಚಿಸುತ್ತೇವೆ. ಇದೇ ಪ್ರಕಾರ ದೇವರಿಗೆ ರೂಪವನ್ನೂ ನಾಮವನ್ನೂ ನೀಡಿರುವವರು ನಾವು. ಸತ್ಯಕ್ಕೆ ರೂಪವೂ ನಾಮವೂ ಇಲ್ಲ. ನಮ್ಮ ಹಾಗೆ ಶಬ್ದ […]

Download Amma App and stay connected to Amma