ಮಕ್ಕಳೇ, ಕಲಿಯುತ್ತಿರುವಕಾಲದಲ್ಲಿ ಹುಡುಗರಿಗೆ ಲಕ್ಷ್ಯಬೋಧವಿದ್ದರೂ ಅವರ ಮನಸ್ಸು ಹೆಚ್ಚಾಗಿ ಆಟಗಳಲ್ಲೂ, ಇನ್ನಿತರ ಆಮೋದ ಪ್ರಮೋದಗಳಲ್ಲೂ ಇರುತ್ತದೆ. ಆ ಕಾಲಘಟ್ಟದಲ್ಲಿ ತಂದೆಯೂ ತಾಯಿಯೂ ಬೈತಾರೆ. ಓದಿಕೊಂಡು ಹೋಗದಿದ್ದರೆ ಸರ್ ಹೊಡೆಯುತ್ತಾರಂತ ಹೆದರಿಕೆಯಿಂದ ಮಾತ್ರವೇ ಅವರು ಕಲಿಯುವುದು. ಆದರೆ ಹತ್ತನೇ ಕ್ಲಾಸ್ ಪಾಸಾದ ಮೇಲೆ, “ನನಗೆ ಎಂ.ಬಿ.ಬಿ.ಎಸ್.ಗೆ ಹೋಗಬೇಕು, ರ‍್ಯಾಂಕ್ ತೆಗೆದು ಪಾಸಾಗಬೇಕು” ಎಂಬ ಪರಿಜ್ಞಾನ ಬರುವುದು. ಆಗ ಅವರು ಚೆನ್ನಾಗಿ ಓದುತ್ತಾರೆ. ಯಾರು ಬಯ್ಯದೆಯೂ ಹೊಡೆಯದೆಯೂ ವಿದ್ಯಾಭ್ಯಾಸಕ್ಕೆ ಗಮನಕೊಡುತ್ತಾರೆ. ಸಿನೆಮ ನೋಡಲು ಹೋಗುವುದಿಲ್ಲ; ಹೆಚ್ಚು ನಿದ್ದೆ ಮಾಡುವುದಿಲ್ಲ. ಆದರೆ […]