Tag / ಆಧ್ಯಾತ್ಮಿಕತೆ

ಪ್ರಶ್ನೆ: ಸಂಪತ್ತು ಗಳಿಸುವುದು ಆಧ್ಯಾತ್ಮಿಕತೆಗೆ ವಿರೋಧವೇ ? “ಮಕ್ಕಳೇ, ಎಷ್ಟು ಸ್ವತ್ತಿದ್ದರೂ, ಅದರ ಸ್ಥಾನವನ್ನೂ ಪ್ರಯೋಜನವನ್ನೂ ಚೆನ್ನಾಗಿ ಅರ್ಥ ಮಾಡಿಕೊಳ್ಳದಿರುವ ತನಕ ದುಃಖ ಮಾತ್ರವೇ ನಮ್ಮ ಪಾಲಿಗೆ ಇರುವುದು. ಅಗಣಿತ ಸಂಪತ್ತಿದ್ದರೂ ಅದರಿಂದ ಸಿಗುವ ಆನಂದ ತಾತ್ಕಾಲಿಕ ಮಕ್ಕಳೇ. ಶಾಶ್ವತವಾದ ಆನಂದ ಕೊಡಲು ಅದಕ್ಕೆ ಸಾಧ್ಯವಿಲ್ಲ. ಕಂಸನೂ ಹಿರಣ್ಯಕಶಿಪುವೂ ಎಲ್ಲಾ ಸಂಪತ್ತಿನ ಅಧಿಪತಿಗಳಾಗಿರಲಿಲ್ಲವೇ ? ಅವರಿಗೆ ಮನಸ್ಸಮಾಧಾನ ಇತ್ತೇ ? ಎಲ್ಲಾ ಇದ್ದ ರಾವಣನಿಗೆ ಏನು ಶಾಂತಿಯಿತ್ತು ? ಅವರೆಲ್ಲ ಸತ್ಯದ ದಾರಿ ತೊರೆದು, ಅಹಂಕಾರಿಗಳಾಗಿ ಬಾಳಿದರು. […]

ಪ್ರಶ್ನೆ: ದೇವರ ಕೃಪೆಗೂ, ಮಹಾತ್ಮರ ಕೃಪೆಗೂ ಏನು ವ್ಯತ್ಯಾಸ ? “ಆತ್ಮಕ್ಕೆ ಭೇದವಿಲ್ಲ. ಅದು ಎಲ್ಲರಲ್ಲೂ ಒಂದೇ. ಮಹಾತ್ಮರು ಆತ್ಮದ ಸ್ವರೂಪವನ್ನು ತಮ್ಮ ಅರಿವಿನ ಸ್ತರಕ್ಕೆ ತರುತ್ತಾರೆ, ಅಷ್ಟೆ. ನಾವೆಲ್ಲರೂ ಕನ್ನಡಿಗಳು. ಆದರೆ ನಮ್ಮಲ್ಲ್ಲಿ ಪಾದರಸವಿಲ್ಲ. ಮಹಾತ್ಮರ ತಪಸ್ಸಿನಿಂದ ಪಾದರಸ ಉದ್ಭವವಾಗುತ್ತದೆ. ಪಾದರಸವಿರುವ ಕನ್ನಡಿಯಲ್ಲಿ ತಾನೇ ಸ್ಪಷ್ಟವಾದ ಪ್ರತಿಬಿಂಬ ಕಾಣಿಸುವುದು ? ಒಬ್ಬ ಮಹಾತ್ಮನೆದುರಿಗೆ ಹೋದಾಗ ನಮ್ಮ ನಿಜವಾದ ಸ್ವರೂಪ ಅವರಲ್ಲಿ ಪ್ರತಿಫಲಿಸಿ ಕಾಣಲು ಸಾಧ್ಯವಾಗುತ್ತದೆ. ಅದನ್ನು ನೋಡಿ ನಮ್ಮ ಕುರೂಪವನ್ನೂ ಮಲಿನತೆಗಳನ್ನೂ ತೊರೆಯಲು ಸಾಧ್ಯವಾಗುತ್ತದೆ. ಕರೆಂಟು […]

ಅಧ್ಯಾತ್ಮವೇನಂದರೆ ಜೀವನದಲ್ಲಿ ನಾವು ಬಾಳುವ ಮೌಲ್ಯಗಳು. ಅವುಗಳೂ ತಂತ್ರ ಜ್ಞಾನವೂ ಕೈಮೇಳವಿಸಿದಾಗ ಮಾತ್ರವೇ ಮನುಕುಲಕ್ಕೆ ಸರಿಯಾದ ಬೆಳವಣಿಗೆಯೂ ವಿಕಾಸವೂ ಕರಗತವಾಗುವುದು. ಇದು ಹೇಗೆ ಸಾಧ್ಯವಾಗಿಸೋಣ ಎಂಬುವುದೇ ಈ ಶತಮಾನದ ಅತಿ ದೊಡ್ಡ ಸವಾಲು. – ಅಮ್ಮ

ಅಧ್ಯಾತ್ಮವು ಧನಕ್ಕೋ ಕೀರ್ತಿಗೋ ಎದುರಲ್ಲ. ಅವನ್ನು ಗಳಿಸುವುದಕ್ಕೆ ತಡೆಯೂ ಅಲ್ಲ. ಆದರೆ ಅದಕ್ಕಾಗಿ ನಾವು ಸ್ವೀಕರಿಸುವ ಮಾರ್ಗ ಧಾರ್ಮಿಕವಾಗಿರಬೇಕೆಂದು ಮಾತ್ರವೆ ಆಧ್ಯಾತ್ಮಿಕ ಆಚಾರ್ಯರು ಹೇಳುವುದು. – ಅಮ್ಮ

ಆಧ್ಯಾತ್ಮಿಕತೆಯೆನ್ನುವುದು ಪರಮೋಚ್ಛ ಸಯನ್ಸಾಗಿದೆ. ಆಧ್ಯಾತ್ಮಿಕತೆಯಿಲ್ಲದ ಸಯನ್ಸು ಕುರುಡು; ಸಯನ್ಸಿಲ್ಲದ ಆಧ್ಯಾತ್ಮಿಕತೆ ಕುಂಟು. – ಅಮ್ಮ